Categories: ವಿದೇಶ

ವಲಸಿಗರಿದ್ದ ದೋಣಿ ಮುಳುಗಿ ಹಲವರು ಮೃತ್ಯು

ಟ್ಯೂನಿಸ್ : ಆಫ್ರಿಕಾದ 120 ವಲಸಿಗರು ಹಾಗೂ ನಿರಾಶ್ರಿತರನ್ನು ಸಾಗಿಸುತ್ತಿದ್ದ 4 ದೋಣಿಗಳು ಟ್ಯುನೀಷಿಯಾದ ಕರಾವಳಿ ಬಳಿ ಸಮುದ್ರದಲ್ಲಿ ಮುಳುಗಿದ್ದು ಕನಿಷ್ಟ 12 ಮಂದಿ ಮೃತಪಟ್ಟು ಇತರ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ.

ಮೆಡಿಟರೇನಿಯನ್ ಸಮುದ್ರ ದಾಟಿ ಇಟಲಿಯತ್ತ ತೆರಳುವ ಪ್ರಯತ್ನದಲ್ಲಿ ಈ ದುರಂತ ಸಂಭವಿಸಿದೆ. ಟ್ಯುನೀಷಿಯಾದ ತಟರಕ್ಷಣಾ ದಳ 98 ಮಂದಿಯನ್ನು ರಕ್ಷಿಸಿ ಸುರಕ್ಷಿತವಾಗಿ ದಡ ತಲುಪಿಸಿದೆ ಎಂದು ತಟರಕ್ಷಣಾ ದಳದ ಲೆಫ್ಟಿನೆಂಟ್ ಕರ್ನಲ್ ಅಲಿ ಅಯಾರಿ ಹೇಳಿದ್ದಾರೆ. ಆಫ್ರಿಕಾ ಮತ್ತು ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿರುವ ತೀವ್ರ ಬಡತನ ಮತ್ತು ಸಂಘರ್ಷದ ಸ್ಥಿತಿಯಿಂದಾಗಿ ಅಲ್ಲಿಂದ ಪಲಾಯನ ಮಾಡಿ ಯುರೋಪ್ನತ್ತ ತೆರಳುವ ವಲಸಿಗರು ಟ್ಯುನೀಷಿಯಾ ಕರಾವಳಿಯ ಮೂಲಕ ಪ್ರಯಾಣಿಸುತ್ತಿದ್ದಾರೆ.

ಕಳೆದ ವರ್ಷ ಈ ರೀತಿ ಅಕ್ರಮವಾಗಿ ಪ್ರಯಾಣಿಸುತ್ತಿದ್ದ 20,000ಕ್ಕೂ ಅಧಿಕ ವಲಸಿಗರು ಹಾಗೂ ನಿರಾಶ್ರಿತರನ್ನು ಬಂಧಿಸಿರುವುದಾಗಿ ಟ್ಯುನೀಷಿಯಾ ಸರಕಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಟ್ಯುನೀಷಿಯಾ ಕರಾವಳಿಯ ಮೂಲಕ ಇಟಲಿಯತ್ತ ತೆರಳುವ ಪ್ರಯತ್ನದ ಪ್ರಮಾಣ ಹೆಚ್ಚಿದೆ. 2020ರಲ್ಲಿ ಟ್ಯುನೀಷಿಯಾ ಮೂಲಕ ಇಟಲಿಗೆ 95,000 ವಲಸಿಗರು ಆಗಮಿಸಿದ್ದರೆ 2021ರಲ್ಲಿ ಈ ಪ್ರಮಾಣ 1,23,000ಕ್ಕೇರಿದೆ ಎಂದು ನಿರಾಶ್ರಿತರಿಗಾಗಿನ ವಿಶ್ವಸಂಸ್ಥೆಯ ಹೈಕಮಿಷನರ್ (ಯುಎನ್‌ಎಚ್ಸಿಆರ್) ವರದಿ ಉಲ್ಲೇಖಿಸಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

13 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

31 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

52 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago