ಕೊಲಂಬೊ : ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ.
ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರ ಅಭದ್ರತೆ ತೋರಿರುವುದರಿಂದ ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿನ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಹಿತಿ ನೀಡಿದ್ದಾರೆ.
ಇದೇ ಸಂಬಂಧ ಅಕ್ಕಿ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಪ್ರಕ್ರಿಯೆ ನಿರ್ವಹಣೆಗಾಗಿ ಉನ್ನತ ಸೇನಾಧಿಕಾರಿಯನ್ನು ರಾಜಪಕ್ಸ ಅವರು ನೇಮಕ ಮಾಡಿದ್ದಾರೆ.
ಶ್ರೀಲಂಕಾದಲ್ಲಿ ಅಕ್ಕಿ, ಆಲೂಗಡ್ಡೆ ಸೇರಿದಂತೆ ಹಲವು ದಿನಸಿ ಸಾಮಗ್ರಿ ಬೆಲೆ ಗಗನಕ್ಕೇರುತ್ತಲೇ ಇದೆ. ಅಲ್ಲದೆ ಹಾಲಿನ ಪುಡಿ, ಸೀಮೆ ಎಣ್ಣೆ, ಅಡುಗೆ ಅನಿಲ ಖರೀದಿಗೆ ಗ್ರಾಹಕರು ಅಂಗಡಿ ಮುಂದೆ ಸರದಿ ನಿಲ್ಲುತ್ತಿದ್ದಾರೆ.
2020ರಲ್ಲಿ ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿತ್ತು. ಅಲ್ಲದೆ ವಿದೇಶಿ ವಿನಿಮಯ ಉಳಿಸುವ ಉದ್ದೇಶದಿಂದ ಹಲವು ಅಗತ್ಯ ವಸ್ತುಗಳ ಆಮದಿನ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇವೆಲ್ಲದರಿಂದಾಗಿ ಆಹಾರ ಅಭದ್ರತೆ ತಲೆದೋರಿದೆ ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ.
ಇಂಧನ ಸಚಿವ ಉದಯ ಗಮನ್ ಪಿಲ ಅವರು ಇಂಧನವನ್ನು ಎಚ್ಚರಿಕೆಯಿಂದ ಬಳಸುವಂತೆ ನಾಗರಿಕರಿಗೆ ಮನವಿ ಮಾಡಿದ್ದರು ಎನ್ನುವುದು ಗಮನಾರ್ಹ. ಇಂಧನ ಬಳಕೆ ಕಡಿಮೆಯಾಗದಿದ್ದಲ್ಲಿ ಈ ವರ್ಷಾಂತ್ಯ ಶ್ರೀಲಂಕಾ ಸರ್ಕಾರ ಇಂಧನ ಖರಿದೀಗೆ ರೇಷನ್ ವ್ಯವಸ್ಥೆ ಜಾರಿಗೆ ತರಲಿದೆ ಎನ್ನಲಾಗುತ್ತಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…