News Karnataka Kannada
Saturday, May 04 2024
ವಿದೇಶ

ಶ್ರೀಲಂಕಾದಲ್ಲಿ ಹೊಸದಾಗಿ ಚುನಾವಣೆ ನಡೆಸಲು ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಕರೆ

Sirisena
Photo Credit :

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಶ್ರೀಲಂಕಾದಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕೆಂದು ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಕರೆ ನೀಡಿದ್ದಾರೆ.

ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ದೇಶವು ದೊಡ್ಡ ದುರಂತವನ್ನು ಎದುರಿಸುತ್ತಿರುವ ಸಮಯದಲ್ಲಿ ರಾಜಕಾರಣಿಗಳು ಜನರ ಪರವಾಗಿ ನಿಲ್ಲಬೇಕಿದೆ.

ಈ ಉದ್ದೇಶಕ್ಕಾಗಿ ವಿಶ್ವ ಕಾರ್ಮಿಕ ದಿನದಂದು ಬೀದಿಗಿಳಿದಿದ್ದೇನೆ’ ಎಂದು ತಿಳಿಸಿದ್ದಾರೆ. ‘ಈಗಿನ ನಾಯಕರು ಅಧಿಕಾರದಲ್ಲಿ ಮುಂದುವರಿದರೆ ಜನರು ಸಾಯುವ ಪರಿಸ್ಥಿತಿ ಎದುರಾಗಲಿದೆ. ಈಗಾಗಲೇ ಎರಡರಿಂದ ಮೂರು ಲಕ್ಷ ಜನರು ಹಸಿವಿನಿಂದ ಬಳಲುತ್ತಿದ್ದಾರೆ’ ಎಂದು ಶ್ರೀಲಂಕಾ ಫ್ರೀಡಂ ಪಕ್ಷದ ಅಧ್ಯಕ್ಷರೂ ಆಗಿರುವ ಸಿರಿಸೇನಾ ಹೇಳಿದ್ದಾರೆ.

‘ಈ ಸರ್ಕಾರವು ಅಧಿಕಾರದಿಂದ ನಿರ್ಗಮಿಸಬೇಕೆಂದು ಒತ್ತಾಯಿಸಿ ದೇಶದ ಶ್ರೀಮಂತರು, ರೈತರು, ಸಾರ್ವಜನಿಕ ಸೇವಕರು ಬೀದಿಗಿಳಿದಿದ್ದಾರೆ. ಅವರಂತೆ ನಾನು ಕೂಡ ಬೀದಿಗಿಳಿದಿದ್ದೇನೆ. ಹೊಸ ಸರ್ಕಾರವನ್ನು ರಚಿಸಲು ನಾನು ಬಯಸುತ್ತೇನೆ. ಈ ಕಾರಣಕ್ಕಾಗಿ ಶ್ರೀಲಂಕಾದಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು’ ಎಂದು ಸಿರಿಸೇನಾ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿ ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರ ರಾಜೀನಾಮೆಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಸರ್ಕಾರದ ವಿರುದ್ಧ ಹಲವೆಡೆ ಪ್ರತಿಭಟನೆಗಳೂ ನಡೆದಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು