Categories: ವಿದೇಶ

ಶ್ರೀಲಂಕಾ ಪ್ರಜೆಯ ಹತ್ಯೆ ಸಮರ್ಥಿಸಿದ್ದ ಪಾಕಿಸ್ತಾನದ ಯೂಟ್ಯೂಬರ್‌ಗೆ 1 ವರ್ಷ ಜೈಲು

ಲಾಹೋರ್‌ : ಶ್ರೀಲಂಕಾ ಪ್ರಜೆಯ ಹತ್ಯೆಯನ್ನು ಸಮರ್ಥಿಸಿ ವಿಡಿಯೊ ಮಾಡಿದ್ದ ಪಾಕಿಸ್ತಾನದ 27 ವರ್ಷದ ಯೂಟ್ಯೂಬರ್‌ಗೆ 1 ವರ್ಷ ಜೈಲು ಹಾಗೂ 10,000 ಪಾಕಿಸ್ತಾನಿ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಅಲ್ಲಿನ ಭಯೋತ್ಪಾದನೆ ನಿಗ್ರಹ ಕೋರ್ಟ್‌(ಎಟಿಸಿ ಗುಜ್ರಾನ್‌ವಾಲಾ) ನ್ಯಾಯಮೂರ್ತಿ ನತಾಶಾ ನಯೀಮ್‌ ಅವರು ಯೂಟ್ಯೂಬರ್‌ಗೆ ಶಿಕ್ಷೆ ಘೋಷಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‌ 3ರಂದು ಸುಮಾರು 800 ಮಂದಿಯಿದ್ದ ಉದ್ರಿಕ್ತ ಗುಂಪು ಹಾಗೂ ಉಗ್ರ ಇಸ್ಲಾಮಿಕ್‌ ಪಕ್ಷಕ್ಕೆ ಸೇರಿದ ಸದಸ್ಯರು ಸಿಯಾಲ್‌ಕೋಟ್‌ ಜಿಲ್ಲೆಯ ಗಾರ್ಮೆಟ್‌ ಫ್ಯಾಕ್ಟರಿಗೆ‌ ದಾಳಿ ನಡೆಸಿ, ಮುಖ್ಯಸ್ಥ ಪ್ರಿಯಾಂತ ಕುಮಾರ ಎಂಬುವವರ ಮೇಲೆ ಭೀಕರ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ನಂತರ ಮೃತ ದೇಹಕ್ಕೆ ಬೆಂಕಿ ಹಂಚಿದ್ದರು. 47 ವರ್ಷದ ಕುಮಾರ ಅವರು ದೈವನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪೊಲೀಸರ ಪ್ರಕಾರ ಸಿಯಾಲ್‌ಕೋಟ್‌ನ ಮುಹಮ್ಮದ್‌ ಅದ್ನನ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲಿ ಕುಮಾರ ಅವರ ಹತ್ಯೆಗೆ ಸಂಬಂಧಿಸಿ ವಿಡಿಯೊ ಅಪ್‌ಲೋಡ್‌ ಮಾಡಿದ್ದ. ಇದರಲ್ಲಿ ಕುಮಾರ ಅವರ ಹತ್ಯೆ ಮತ್ತು ಶವಕ್ಕೆ ಬೆಂಕಿ ಹಂಚಿದ ಕೃತ್ಯವನ್ನು ಸಮರ್ಥಿಸಿಕೊಂಡಿದ್ದ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಕೃತ್ಯಕ್ಕೆ ಸಂಬಂಧಿಸಿ 85 ಪ್ರಮುಖ ಆರೋಪಿಗಳನ್ನು ಬಂಧಿಸಿಲಾಗಿದೆ. ಜನವರಿ 31ರೊಳಗೆ ಆರೋಪಿಗಳನ್ನು ಎಟಿಸಿ ಕೋರ್ಟ್‌ಗೆ ಹಾಜರುಪಡಿಸಬೇಕಿದೆ. ಲಾಹೋರ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಮೀರ್‌ ಭಾಟ್ಟಿ ಅವರು ಪ್ರಕರಣದ ಕುರಿತು ಚಾರ್ಟ್‌ಶೀಟ್‌ ದಾಖಲಿಸಲು ನಿರ್ದೇಶನ ನೀಡಿದ್ದರು.

Gayathri SG

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

58 seconds ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

9 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

15 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

29 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

46 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago