News Karnataka Kannada
Friday, May 03 2024
ವಿದೇಶ

ಶ್ರೀಲಂಕಾ: ಸಚಿವ ಸಂಪುಟಕ್ಕೆ 8 ಮಂದಿ ಸೇರ್ಪಡೆ

Sri Lanka's Election Commission is gearing up for local body elections
Photo Credit :

ಕೊಲಂಬೊ: ಬಿಕ್ಕಟ್ಟಿನ ನಡುವೆಯೂ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಸೋಮವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. 8 ಮಂದಿಯನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದೆ. ಆದರೆ, ಅವರು ಹಣಕಾಸು ಸಚಿವರನ್ನು ಇನ್ನೂ ನೇಮಕ ಮಾಡಿಲ್ಲ.

ಡಗ್ಲಾಸ್ ದೇವಾನಂದ (ಮೀನುಗಾರಿಕೆ), ಬಂಡೂಲ ಗುಣವರ್ಧನ (ಸಾರಿಗೆ ಮತ್ತು ಹೆದ್ದಾರಿ, ಸಮೂಹ ಮಾಧ್ಯಮ), ಕೆಹೆಲಿಯಾ ರಂಬೂಕ್‌ವೆಲ್ಲ (ಆರೋಗ್ಯ, ನೀರು ಸರಬರಾಜು), ರಮೇಶ್ ಪತಿರಾನ (ಕೈಗಾರಿಕೆ), ಮಹಿಂದ ಅಮರವೀರ (ಕೃಷಿ, ವನ್ಯಜೀವಿ, ವನ್ಯಜೀವಿ ಸಂರಕ್ಷಣೆ) ಹಾಗೂ ಇತರರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಸ್ವಾತಂತ್ರ್ಯಾ ನಂತರ ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸರ್ವಪಕ್ಷಗಳ ನೇತೃತ್ವದ ಸರ್ಕಾರಕ್ಕೆ ಶುಕ್ರವಾರವಷ್ಟೇ 9 ಮಂದಿ ಸಚಿವರ ನೇಮಕ ಮಾಡಲಾಗಿತ್ತು.

ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ಕಳೆದ ವಾರ ನಾಲ್ವರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು