ಕೊಲಂಬೊ: ಸ್ವಾತಂತ್ರ್ಯಾನಂತರ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಲ್ಲಿ ಮುಳುಗಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಶುಕ್ರವಾರ 9 ಮಂದಿ ನೂತನ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿದರು.
ಶ್ರೀಲಂಕಾ ಫ್ರೀಡಂ ಪಾರ್ಟಿ (ಎಸ್ಎಲ್ಎಫ್ಪಿ) ಪ್ರತಿನಿಧಿಸುವ ಮಾಜಿ ಸಚಿವ ನಿಮಲ್ ಸಿರಿಪಾಲ ಡಿ ಸಿಲ್ವಾ, ಸ್ವತಂತ್ರ ಸಂಸದರಾದ ಸುಶಿಲ್ ಪ್ರೇಮಜಯಂತ, ವಿಜಯದಾಸ ರಾಜಪಕ್ಸ, ತಿರಾನ್ ಅಲೆಸ್ ಸೇರಿದಂತೆ ಒಂಬತ್ತು ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಕಳೆದ ವಾರ ನಾಲ್ವರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.
ರಾಷ್ಟ್ರಪತಿ ಮತ್ತು ಪ್ರಧಾನಿ ಸೇರಿ ಸಚಿವ ಸಂಪುಟವು 25 ಸದಸ್ಯರಿಗೆ ಸೀಮಿತವಾಗಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ನಿಮಲ್ ಸಿರಿಪಾಲ ಡಿ ಸಿಲ್ವಾ ಪೋರ್ಟ್ಸ್ ಅವರು ನೌಕಾ ಮತ್ತು ವಿಮಾನಯಾನ ಸೇವೆಗಳ ಸಚಿವರಾಗಿ, ಸುಸಿಲ್ ಪ್ರೇಮಜಯಂತ ಶಿಕ್ಷಣ ಸಚಿವರಾಗಿ ನೇಮಕಗೊಂಡರೆ, ಕೆಹೆಲಿಯ ರಂಬುಕವೆಲ್ಲಾ ಆರೋಗ್ಯ ಸಚಿವರಾಗಿ ಮತ್ತು ವಿಜಯದಾಸ ರಾಜಪಕ್ಷೆ ಅವರು ನ್ಯಾಯ, ಜೈಲು ವ್ಯವಹಾರಗಳು ಮತ್ತು ಸಾಂವಿಧಾನಿಕ ಸುಧಾರಣೆ ಸಚಿವರಾಗಿದ್ದಾರೆ.
ಪ್ರವಾಸೋದ್ಯಮ ಸಚಿವರಾಗಿ ಹರಿನ್ ಫೆರ್ನಾಂಡೋ, ತೋಟಗಾರಿಕೆ ಸಚಿವರಾಗಿ ರಮೇಶ್ ಪತಿರಾಣ, ಕಾರ್ಮಿಕ ಮತ್ತು ವಿದೇಶಿ ಉದ್ಯೋಗ ಸಚಿವರಾಗಿ ಮನುಷ ನಾಣಯ್ಯ, ವ್ಯಾಪಾರ, ವಾಣಿಜ್ಯ ಮತ್ತು ಆಹಾರ ಭದ್ರತೆ ಸಚಿವರಾಗಿ ನಳಿನ್ ಫೆರ್ನಾಂಡೋ ಮತ್ತು ತಿರಾನ್ ಅಲ್ಲೆಸ್ ಸಾರ್ವಜನಿಕ ಭದ್ರತಾ ಸಚಿವರಾಗಿ ನೇಮಕವಾಗಿದ್ದಾರೆ.
ವಿದೇಶಿ ಕರೆನ್ಸಿಯ ಕೊರತೆಯಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಿದೆ. ದೇಶವು ಆಹಾರ ಪದಾರ್ಥ ಮತ್ತು ಇಂಧನ ಆಮದುಗಳಿಗೂ ಪಾವತಿಸಲು ವಿದೇಶಿ ಕರೆನ್ಸಿ ಇಲ್ಲದಾಗಿದೆ. ಇದರ ಪರಿಣಾಮ ಅತ್ಯಗತ್ಯ ವಸ್ತುಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆಗೆ ಕಾರಣವಾಗಿದೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡವನ್ನು ಆತಿಥೇಯ ಸನ್ರೈಸರ್ಸ್ ಹೈದರಾಬಾದ್ ತಂಡ…
ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…