ವಿದೇಶ

ಸಿಂಗಪುರ: ಬೂಸ್ಟರ್‌ ಡೋಸ್ ಪಡೆದಿದ್ದ ಮಹಿಳೆಗೆ ಒಮಿಕ್ರಾನ್ ದೃಢ

ಎಲ್ಲೆಡೆ ಭೀತಿ ಮೂಡಿಸುತ್ತಿರುವ ಒಮಿಕ್ರಾನ್ ಅವತಾರಿ ಕೋವಿಡ್‌ ವ್ಯಾಪಿಸದಂತೆ ಜಗತ್ತಿನಾದ್ಯಂತ ಸರ್ಕಾರಗಳು ಕಟ್ಟೆಚ್ಚರ ವಹಿಸಿವೆ. ಇದರ ನಡುವೆಯೂ ಜನರಲ್ಲಿ ಈ ಸೋಂಕಿನ ಬಗ್ಗೆ ಅರಿವಿನ ಕೊರತೆಯಿಂದ ಆಗಾಗ ಒಂದಷ್ಟು ಎಡವಟ್ಟುಗಳು ಆಗುತ್ತಿರುವುದು ವಿಷಾದನೀಯ.

ಸಿಂಗಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕ ಸೇವಾ ಸಿಬ್ಬಂದಿಯಲ್ಲಿ ಒಬ್ಬರಿಗೆ ಬೂಸ್ಟರ್‌ ಡೋಸ್ ಪಡೆದಿದ್ದರೂ ಸಹ ಒಮಿಕ್ರಾನ್ ಪತ್ತೆಯಲ್ಲಿ ಪಾಸಿಟಿವ್ ಕಂಡುಬಂದಿದ್ದಾರೆ.

ಚಾಂಗಿ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ಮತ್ತು 3ರಲ್ಲಿ ಕೆಲಸ ಮಾಡುವ 24 ವರ್ಷದ ಯುವತಿಯೊಬ್ಬರು ತಮ್ಮ ಕೆಲಸದ ವೇಳೆ ಒಮಿಕ್ರಾನ್ ಸೋಂಕಿತ ಪ್ರಯಾಣಿಕರೊಬ್ಬರ ತಪಾಸಣೆ ನಡೆಸಿದಾಗ ಅವರಿಗೆ ಈ ಸೋಂಕು ಅಲ್ಲಿಂದ ಬಂದಿರಬಹುದು ಎಂದು ಸಿಂಗಪುರದ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದೇ ವೇಳೆ, ಜರ್ಮನಿಯಿಂದ ಸಿಂಗಪುರ ಏರ್‌ಲೈನ್‌ ವಿಮಾನ ಎಸ್‌ಕ್ಯೂ325ನಲ್ಲಿ ಆಗಮಿಸಿದ್ದ 46 ವರ್ಷದ ಮಹಿಳೆಯೊಬ್ಬರು ಸಹ ಪ್ರಾಥಮಿಕವಾಗಿ ಒಮಿಕ್ರಾನ್ ಪಾಸಿಟಿವ್ ಎಂದು ಕಂಡುಬಂದಿದ್ದಾರೆ.

ಫ್ರಾನ್ಸ್‌ನಲ್ಲಿ ವಿಮಾನವೇರುವ ಮುನ್ನ ನೆಗೆಟಿವ್‌ ಎಂದು ಪರೀಕ್ಷೆಯಲ್ಲಿ ಕಂಡುಬಂದ ಈ ಮಹಿಳೆ ಸಿಂಗಪುರದಲ್ಲಿ ಇಳಿಯುತ್ತಲೇ ಮಾಡಿದ ಪಿಸಿಆರ್‌ ಪರೀಕ್ಷೆಯಲ್ಲೂ ನೆಗೆಟಿವ್‌ ಕಂಡುಬಂದಿದ್ದರು. ಆದರೆ ಬುಧವಾರದಂದು ನೆಗಡಿ ಬಂದ ಬಳಿಕ ಮಾಡಿದ ಪರೀಕ್ಷೆಯಲ್ಲಿ ಪಾಸಿಟಿವ್‌ ಆಗಿಬಿಟ್ಟಿದ್ದಾರೆ.

ಸಿಂಗಪುರದಲ್ಲಿ ಸಾಂಕ್ರಮಿಕ ಆರಂಭಗೊಂಡಾಗಿನಿಂದ ಈವರೆಗೆ 2,71,979ರಷ್ಟು ಕೋವಿಡ್ ಕೇಸುಗಳು ಪತ್ತೆಯಾಗಿದ್ದು, 779 ಮಂದಿ ಮೃತಪಟ್ಟಿದ್ದಾರೆ.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

21 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

46 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago