Categories: ವಿದೇಶ

ಆಸ್ಟ್ರೇಲಿಯಾದಲ್ಲಿ ಮುಂದುವರಿದ ಹಿಂದು ದೇವಾಲಯಗಳ ಮೇಲಿನ ದಾಳಿ

ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ಹಿಂದು ದೇವಾಲಯಗಳ ಮೇಲೆ ಸರಣಿ ದಾಳಿ ಮುಂದುವರಿದಿದೆ. ಶನಿವಾರ ಬ್ರಿಸ್ಬೇನ್‌ನ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ಖಾಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿ ಹಾನಿ ಮಾಡಿದ್ದಾರೆ.

ದೇವಾಲಯದ ಅಧ್ಯಕ್ಷ ಸತೀಂದರ್ ಶುಕ್ಲಾ ಆಸ್ಟ್ರೇಲಿಯಾ ಟುಡೇಗೆ ಘಟನೆ ಕುರಿತು ವಿವರಿಸಿದ್ದು, “ಇಂದು ಬೆಳಿಗ್ಗೆ ಅರ್ಚಕರು ಮತ್ತು ಭಕ್ತರು ಕರೆ ಮಾಡಿ ನಮ್ಮ ದೇವಾಲಯದ ಕಾಂಪೌಂಡ್‌ ನಾಶ ಮಾಡಿರುವುದನ್ನು ತಿಳಿಸಿದರು. ನಾವು ಈ ಬಗ್ಗೆ ಕ್ವೀನ್ಸ್‌ಲ್ಯಾಂಡ್ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಪೊಲೀಸರು ದೇವಾಲಯ ಮತ್ತು ಭಕ್ತರ ಸುರಕ್ಷತೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಫೆಬ್ರವರಿ 22 ರಂದು ಬ್ರಿಸ್ಬೇನ್‌ನಲ್ಲಿರುವ ಭಾರತೀಯ ದೂತಾವಾಸವನ್ನು ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ ನಂತರ ಭಾರತೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು.

2023 ರಿಂದ ಈಚೆಗೆ ಆಸ್ಟ್ರೇಲಿಯಾದ ಹಿಂದೂ ದೇವಾಲಯಗಳು ಮೇಲೆ ಭಾರತ ವಿರೋಧಿ ಘೋಷಣೆಗಳು ಮತ್ತು ಗೀಚು ಬರಹಗಳೊಂದಿಗೆ ಗೋಡೆಗಳನ್ನು ವಿರೂಪಗೊಳಿಸುತ್ತಿರುವ ಘಟನೆಗಳು ಹೆಚ್ಚಿದ್ದು, ಖಲಿಸ್ತಾನ ಬೆಂಬಲಿಗರ ದಾಳಿ ಹೆಚ್ಚಿದೆ. ಕಳೆದ ತಿಂಗಳು, ಬ್ರಿಸ್ಬೇನ್‌ನ ಗಾಯತ್ರಿ ಮಂದಿರಕ್ಕೆ ಪಾಕಿಸ್ತಾನ ಮೂಲದ ಖಲಿಸ್ತಾನ್ ಉಗ್ರಗಾಮಿಗಳಿಂದ ಬೆದರಿಕೆ ಕರೆಗಳು ಬಂದಿತ್ತು. ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯನ್ನು ಬೆಂಬಲಿಸುವಂತೆ ಹಿಂದೂ ಸಮುದಾಯವನ್ನು ಕೇಳಿಕೊಳ್ಳಲಾಗಿತ್ತು. “ಖಾಲಿಸ್ತಾನ್ ಬೆಂಬಲಿಗರು ಆಸ್ಟ್ರೇಲಿಯನ್ ಹಿಂದೂ ಸಮುದಾಯವನ್ನು ಭಯಭೀತಗೊಳಿಸುತ್ತಿದ್ದಾರೆ. ನಮ್ಮ ಧರ್ಮವನ್ನು ಆಚರಿಸಲು ಮತ್ತು ದೇವಾಲಯಗಳಿಗೆ ಭೇಟಿ ನೀಡುವುದಕ್ಕೆ ಹಿಂಜರಿಯುವಂತೆ ಮಾಡುವುದು ಅವರ ಉದ್ದೇಶ ಎಂದು ಬ್ರಿಸ್ಬೇನ್ ನಿವಾಸಿಯೊಬ್ಬರು ಆಸ್ಟ್ರೇಲಿಯಾ ಟುಡೆಗೆ ತಿಳಿಸಿದರು.

ಘಟನೆಯನ್ನು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಹೈಕಮಿಷನ್ ಖಂಡಿಸಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago