ಬಾಂಗ್ಲಾದೇಶ: ಹಳಿ ದಾಟುತ್ತಿದ್ದ ಮಿನಿ ಬಸ್ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿರುವು ದುರಂತ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.
ಅಮನ್ ಬಜಾರ್ ಪ್ರದೇಶದ ಕೋಚಿಂಗ್ ಸೆಂಟರ್ನ ಕೆಲವು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಿನಿ ಬಸ್ನಲ್ಲಿ ಕೊಯಾಚೋರೊ ಎಂಬ ಜಲಪಾತವನ್ನು ವೀಕ್ಷಿಸಲು ತೆರಳಿ, ವಾಪಸಾಗುವಾಗ ಈ ಘಟನೆ ದುರಂತ ನಡೆದಿದೆ.
ರೈಲ್ವೆ ಕ್ರಾಸಿಂಗ್ ಬಳಿ ಗೇಟ್ ಹಾಕದ ಕಾರಣ ಮಿನಿ ಬಸ್ ಯಥಾಸ್ಥಿತಿಯಲ್ಲಿ ಸಾಗಿದೆ. ಅದೇ ವೇಳೆ ವೇಗವಾಗಿ ಬಂದ ಎಕ್ಸ್ಪ್ರೆಸ್ ರೈಲು ಬಸ್ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್ ದೂರದವರೆಗೆ ರೈಲು ಮಿನಿ ಬಸ್ ಅನ್ನು ಎಳೆದೊಯ್ದಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದ 11 ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ನಿರ್ಲಕ್ಷ್ಯ ವಹಿಸಿದ ಗೇಟ್ಮ್ಯಾನ್ನನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.