Categories: ವಿದೇಶ

ಚೀನಾದಲ್ಲಿ ಆರ್ಥಿಕ ಹಿಂಜರಿತ, ಆತಂಕ ಹುಟ್ಟಿಸಿದ ಅಂಕಿ ಅಂಶ

ನವದೆಹಲಿ: ಯುವ ನಿರುದ್ಯೋಗ ಅಂಕಿಅಂಶಗಳನ್ನು ಬಿಡುಗಡೆ ಮಾಡುವುದನ್ನು ಚೀನಾ ನಿಲ್ಲಿಸಿದೆ. ಇದನ್ನು ಆರ್ಥಿಕ ಕುಸಿತದ ಸೂಚನೆ ಎಂದು ಕೆಲ ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜೂನ್‌ನಲ್ಲಿ ಚೀನಾದಲ್ಲಿ ನಗರ ಪ್ರದೇಶದ 16 ರಿಂದ 24 ವರ್ಷ ವಯಸ್ಸಿನವರ ನಿರುದ್ಯೋಗ ದರವು 20 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ದೇಶದ ಕೇಂದ್ರ ಬ್ಯಾಂಕ್ ಮಂಗಳವಾರ ಸಾಲದ ವೆಚ್ಚವನ್ನು ಕಡಿತಗೊಳಿಸಿದೆ. ಮಂಗಳವಾರ ಪ್ರಕಟವಾದ ಅಧಿಕೃತ ಅಂಕಿಅಂಶಗಳು ಚೀನಾದ ಒಟ್ಟಾರೆ ನಿರುದ್ಯೋಗ ದರವು ಜುಲೈನಲ್ಲಿ 5.3 ಶೇಕಡಾಕ್ಕೆ ಏರಿದೆ ಎಂದು ತೋರಿಸಿದೆ.

ಸರ್ಕಾರ ಯುವಕರ ನಿರುದ್ಯೋಗ ದತ್ತಾಂಶವನ್ನು ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಹೇಳಿದೆ. ಈ ಕುರಿತು ರಾಷ್ಟ್ರೀಯ ಅಂಕಿಅಂಶಗಳ ಬ್ಯೂರೊದ ವಕ್ತಾರ ವಕ್ತಾರ ಫು ಲಿಂಗುಯಿ ಮಾತನಾಡಿದ್ದು ಯುವ ಜನರಲ್ಲಿ ನಿರುದ್ಯೋಗವನ್ನು ಲೆಕ್ಕಾಚಾರ ಮಾಡುವ ವಿಧಾನವನ್ನು ಮರುಪರಿಶೀಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ದೇಶದ ಆರ್ಥಿಕತೆ ಮತ್ತು ಸಮಾಜವು ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಿಟ್ಟಿನಲ್ಲಿ ಅಂಕಿಅಂಶಗಳ ಪಟ್ಟಿಯನ್ನು ಸುಧಾರಿಸುವ ಅಗತ್ಯವಿದೆ” ಎಂದು ಫು ಲಿಂಗುಯಿ ತಿಳಿಸಿದ್ದಾರೆ.

ಚೀನಾ 2018 ರಲ್ಲಿ ಯುವ ನಿರುದ್ಯೋಗ ಅಂಕಿಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿತು. ಆದರೆ  ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರ ಉದ್ಯೋಗ ಸ್ಥಿತಿಯ ಡೇಟಾವನ್ನು ಅಲ್ಲಿ ಪ್ರಕಟಿಸುವುದಿಲ್ಲ. ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ನಂತರದ ಆರ್ಥಿಕ ಚೇತರಿಕೆ ನಿಧಾನವಾಗುತ್ತಿರುವುದರಿಂದ ಈ ಪ್ರಕಟಣೆ ಬಂದಿದೆ ಎಂದು ಬಿಬಿಸಿ ವರದಿ ಮಾಡಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago