ಕೊಲಂಬೊ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಸೋಮವಾರದಿಂದ ಜಾರಿಗೆ ಬರುವಂತೆ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಹಂಗಾಮಿ ಅಧ್ಯಕ್ಷ ವಿಕ್ರಮಸಿಂಘೆ ಅವರು ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಪೂರೈಕೆಗಳು ಮತ್ತು ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ ಎಂದು ವಿಶೇಷ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
1959ರ ಅಧಿನಿಯಮ ಸಂಖ್ಯೆ 8, 1978ರ ಕಾನೂನು ಸಂಖ್ಯೆ 6 ಮತ್ತು 1988ರ ಅಧಿನಿಯಮ ಸಂಖ್ಯೆ 28ರ ತಿದ್ದುಪಡಿಯಿಂದ ತಿದ್ದುಪಡಿ ಮಾಡಲಾದ ಸಾರ್ವಜನಿಕ ಭದ್ರತಾ ಸುಗ್ರೀವಾಜ್ಞೆಯ (ಅಧ್ಯಾಯ 40) 2ನೇ ಪ್ರಕರಣದಿಂದ (ಅಧ್ಯಾಯ 40) ತಮಗೆ ನೀಡಲಾಗಿರುವ ಅಧಿಕಾರಗಳ ಆಧಾರದ ಮೇಲೆ ಹಂಗಾಮಿ ಅಧ್ಯಕ್ಷ ವಿಕ್ರಮಸಿಂಘೆ ಅವರು ಹೊರಡಿಸಿದ ಘೋಷಣೆಯಲ್ಲಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿದೆ. ಎಂದು ಮಾಧ್ಯಮಗಳು ವರದಿ ಮಾಡಿದೆ.
ಅಧ್ಯಕ್ಷೀಯ ಅಭ್ಯರ್ಥಿಗಳ ನಾಮಪತ್ರಗಳು ಮಂಗಳವಾರ ನಡೆಯಲಿದ್ದು, ಜುಲೈ ೨೦ ರಂದು ಶ್ರೀಲಂಕಾದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ.
ಮಾಜಿ ಅಧ್ಯಕ್ಷ ಗೊಟಬಯಾ ರಾಜಪಕ್ಸೆ ಅವರು ಮಾಲ್ಡೀವ್ಸ್ ಮೂಲಕ ಸಿಂಗಾಪುರಕ್ಕೆ ಪಲಾಯನ ಮಾಡಿದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.