ದಾರ್ ಎಸ್ ಸಲಾಮ್: ತಾಂಜೇನಿಯಾದ ವಾಯುವ್ಯ ಕಾಗೇರಾ ಪ್ರದೇಶದ ವಿಕ್ಟೋರಿಯಾ ಸರೋವರಕ್ಕೆ ಭಾನುವಾರ ಬೆಳಿಗ್ಗೆ ಅಪ್ಪಳಿಸಿದ ವಿಮಾನದಿಂದ 26 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ದಾರ್ ಎಸ್ ಸಲಾಮ್ ಜೂಲಿಯಸ್ ನೈರೆರೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾಗೆರಾ ಪ್ರದೇಶದ ಬುಕೋಬಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವಿಮಾನವು 43 ಜನರನ್ನು ಕರೆದೊಯ್ಯುತ್ತಿತ್ತು ಎಂದು ಕಾಗೇರಾ ಪ್ರಾದೇಶಿಕ ಆಯುಕ್ತ ಆಲ್ಬರ್ಟ್ ಚಲಮಿಲಾ ತಿಳಿಸಿದ್ದಾರೆ.
ವಿಮಾನದಲ್ಲಿದ್ದ 43 ಜನರ ಪೈಕಿ 39 ಮಂದಿ ಪ್ರಯಾಣಿಕರು, ಇಬ್ಬರು ಪೈಲಟ್ ಗಳು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿಯಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಯಾದ ಪ್ರೆಸಿಷನ್ ಏರ್ ಗೆ ಸೇರಿದ ವಿಮಾನದಲ್ಲಿ ಇನ್ನೂ ಸಿಲುಕಿರುವ 13 ಪ್ರಯಾಣಿಕರನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಇನ್ನೂ ಶ್ರಮಿಸುತ್ತಿದ್ದಾರೆ ಎಂದು ಚಲಮಿಲಾ ಹೇಳಿದರು.
ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಅವರು ಹೇಳಿದರು, ಅಧಿಕಾರಿಗಳು ಇನ್ನೂ ವಿಮಾನದೊಳಗೆ ಸಿಕ್ಕಿಬಿದ್ದ ಪೈಲಟ್ ಗಳನ್ನು ಸಂಪರ್ಕಿಸುತ್ತಿದ್ದಾರೆ ಎಂದು ಹೇಳಿದರು.
ತಾಂಜೇನಿಯಾ, ಕೀನ್ಯಾ ಮತ್ತು ಉಗಾಂಡಾ ಹಂಚಿಕೊಂಡ ವಿಶ್ವದ ಎರಡನೇ ಅತಿದೊಡ್ಡ ಸಿಹಿನೀರಿನ ಸರೋವರವಾದ ವಿಕ್ಟೋರಿಯಾ ಸರೋವರಕ್ಕೆ ಸ್ಥಳೀಯ ಕಾಲಮಾನ ಬೆಳಿಗ್ಗೆ 8:20 ರ ಸುಮಾರಿಗೆ (0520 ಜಿಎಂಟಿ) ಬುಕೋಬಾ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ವಿಮಾನ ಪತನಗೊಂಡಿದೆ ಎಂದು ಚಲಮಿಲಾ ಹೇಳಿದರು.
ಶಾಲೆಗಳ ಬಾಂಬ್ ಬೆದರಿಕೆ ಬೆನ್ನಲ್ಲೆ ಇದೀಗ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್ನಲ್ಲಿದ್ದ ಟಿಶ್ಯೂ ಪೇಪರ್ನಲ್ಲಿ ಬೆದರಿಕೆ…
ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…
ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…
ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಅಮಾನತು ಮಾಡಿ ಆದೇಶ…
ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…