Categories: ವಿದೇಶ

ನವಜಾತ ಶಿಶುವಿನ ತಲೆ ಕತ್ತರಿಸಿ ಗರ್ಭದಲ್ಲೇ ಉಳಿಸಿದ ಆಸ್ಪತ್ರೆ ಸಿಬ್ಬಂದಿ

ಕರಾಚಿ: ನವಜಾತ ಶಿಶುವಿನ ತಲೆ ಕತ್ತರಿಸಿ ತಾಯಿಯ ಗರ್ಭದಲ್ಲೇ ಉಳಿಸಿದ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದ ಈ ವೈದ್ಯಕೀಯ ನಿರ್ಲಕ್ಷ್ಯದ ಕ್ರಮದಿಂದಾಗಿ 32 ವರ್ಷ ವಯಸ್ಸಿನ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.

ಈ ಘಟನೆಗೆ ಕಾರಣರಾದವರನ್ನು ಪತ್ತೆ ಮಾಡಲು ಮತ್ತು ಘಟನೆಯ ವಿಚಾರಣೆಗೆ ಸಿಂಧ್ ಸರ್ಕಾರ ವೈದ್ಯಕೀಯ ತನಿಖಾ ಮಂಡಳಿಯನ್ನು ರಚಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ.

“ಗುಡ್ಡಗಾಡು ಜಿಲ್ಲೆಯಾದ ಥಾರ್‍ಪಾರ್ಕರ್‌ ನ ಆದಿವಾಸಿ ಮಹಿಳೆ ಮೊದಲು ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದಾಗ ಪ್ರಸೂತಿ ತಜ್ಞರು ಲಭ್ಯ ಇರಲಿಲ್ಲ. ಅನನುಭವಿ ಸಿಬ್ಬಂದಿಯ ಕ್ರಮದಿಂದ ಆಕೆಗೆ ಆಘಾತವಾಗಿದೆ” ಎಂದು ಜಮ್‍ಶೋರೊ ಲಿಖಾಯತ್ ವೈದ್ಯಕೀಯ ಮತ್ತು ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಸೂತಿ ವಿಭಾಗದ ಮುಖ್ಯಸ್ಥ ಪ್ರೊ. ರಹೀಲ್ ಸಿಕಂದರ್ ಹೇಳಿದ್ದಾರೆ.

ತಾಯಿಯ ಗರ್ಭದಲ್ಲೇ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿದ ಆರ್‌ಎಚ್‍ಸಿ ಸಿಬ್ಬಂದಿ, ಅಲ್ಲೇ ಬಿಟ್ಟು ಶಸ್ತ್ರಚಿಕಿತ್ಸೆ ಮುಗಿಸಿದರು ಎಂದು ಅವರು ವಿವರಿಸಿದ್ದಾರೆ.

ಮಹಿಳೆ ಮಾರಣಾಂತಿಕ ಆರೋಗ್ಯ ಸಮಸ್ಯೆ ಎದುರಿಸಿದಾಗ, ಮಿತಿ ಎಂಬಲ್ಲಿನ ಆಸ್ಪತ್ರೆಗೆ ಧಾವಿಸಿದರು. ಬಳಿಕ ಕುಟುಂಬದವರು ಎಲ್‍ಯುಎಂಎಚ್‍ಎಸ್‍ಗೆ ಕರೆದುಕೊಂಡು ಬಂದಾಗ ಮಗುವಿನ ತಲೆಯನ್ನು ಗರ್ಭದಿಂದ ಹೊರತೆಗೆಯಲಾಯಿತು ಎಂದು ವಿವರಿಸಿದ್ದಾರೆ.

Gayathri SG

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

20 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

37 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

55 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

2 hours ago