ವಿದೇಶ

ಇಸ್ಲಾಮಾಬಾದ್: ಪಾಕ್ ನಲ್ಲಿ ಬಾಂಬ್ ಸ್ಫೋಟ – 4 ಸಾವು, 10 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭಾನುವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಂತ್ಯದ ಬರ್ಖಾನ್ ಜಿಲ್ಲೆಯ ಜನನಿಬಿಡ ಮಾರುಕಟ್ಟೆಯಾದ ರುಕ್ನಿ ಬಜಾರ್ ನಲ್ಲಿ ಸ್ಫೋಟ ಸಂಭವಿಸಿದೆ. ಮೋಟರ್  ಸೈಕಲ್ ನಲ್ಲಿ ಇರಿಸಲಾಗಿದ್ದ ಸ್ಫೋಟಕ ಸಾಧನವನ್ನು ರಿಮೋಟ್ ನಿಯಂತ್ರಿತ ಸಾಧನದಿಂದ ಸ್ಫೋಟಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಪೊಲೀಸರು, ಭದ್ರತಾ ಪಡೆಗಳು  ಸ್ಥಳಕ್ಕೆ ಧಾವಿಸಿ ಶವಗಳನ್ನು ಮತ್ತು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿವೆ. ಈ ಪ್ರದೇಶವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆಸ್ಪತ್ರೆಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಾರಣಾಂತಿಕ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಇದಕ್ಕೂ ಮುನ್ನ ಶನಿವಾರ ಸಂಜೆ ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯಲ್ಲಿ ಅಪರಿಚಿತ ಭಯೋತ್ಪಾದಕರು ಪೊಲೀಸ್ ವಾಹನದ ಮೇಲೆ ರಸ್ತೆಬದಿಯ ಬಾಂಬ್ ನಿಂದ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

Ashika S

Recent Posts

ಸ್ಕೂಟರ್ ಗಳ ನಡುವೆ ಅಪಘಾತ ಸಹ ಸವಾರ ಮೃತ್ಯು

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರ್ಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಢಿಕ್ಕಿ ಹೊಡೆದ…

17 mins ago

ಬೀದರ್: ಗಡಿಭಾಗದಲ್ಲಿ ಮಾದರಿ ಸರ್ಕಾರಿ ಪ್ರೌಢಶಾಲೆ

ಶಿಕ್ಷಕರು ಮತ್ತು ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಿದರೆ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಬೆಳೆಯುತ್ತವೆ. ಇದಕ್ಕೆ ಪಟ್ಟಣದ ಸರ್ಕಾರಿ ಪ್ರೌಢಶಾಲೆ…

31 mins ago

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

43 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

47 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

56 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

1 hour ago