News Karnataka Kannada
Thursday, May 02 2024
ವಿದೇಶ

ಇಸ್ಲಾಮಾಬಾದ್: ನವಾಜ್-ಜರ್ದಾರಿ ನಂಟು ಪಾಕಿಸ್ತಾನದ ಆರ್ಥಿಕತೆಯನ್ನು ನಾಶಪಡಿಸುತ್ತಿದೆ ಎಂದ ಇಮ್ರಾನ್

Major decisions of Pakistan are being taken in London: Imran Khan
Photo Credit : Wikimedia

ಇಸ್ಲಾಮಾಬಾದ್: ಪಿಎಂಎಲ್-ಎನ್ ಮುಖ್ಯಸ್ಥ ನವಾಜ್ ಶರೀಫ್ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ನಡುವಿನ ಸಂಬಂಧವು ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷರು ಇಸ್ಲಾಮಾಬಾದ್ ನಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ದೇಶದಲ್ಲಿನ ತಕ್ಷಣದ ಮತ್ತು ಪಾರದರ್ಶಕ ಸಾರ್ವತ್ರಿಕ ಚುನಾವಣೆಗಳು ರಾಜಕೀಯ ಪ್ರಕ್ಷುಬ್ಧತೆಯಿಂದ ಹೊರಬರುವ ಏಕೈಕ ಮಾರ್ಗ ಎಂದು ಪುನರುಚ್ಚರಿಸಿದ ಅವರು, ಆರ್ಥಿಕತೆಯ ಕುಸಿತವು ಸರಿಪಡಿಸಲಾಗದ ಹಾನಿಯನ್ನು ಉಂಟುಮಾಡುತ್ತಿದೆ ಎಂದು ಹೇಳಿದರು.

ಅವಿಶ್ವಾಸ ನಿರ್ಣಯದ ಮೂಲಕ ಏಪ್ರಿಲ್ ನಲ್ಲಿ ಪ್ರಧಾನಿ ಹುದ್ದೆಯಿಂದ ಉಚ್ಚಾಟನೆಗೊಂಡ ಖಾನ್, ಸರ್ಕಾರವು ಅಧಿಕಾರದಲ್ಲಿ ಉಳಿಯುವ ಬಗ್ಗೆ ಚಿಂತಿಸುತ್ತಿದೆಯೇ ಹೊರತು ದೇಶದ ಪರಿಸ್ಥಿತಿಯ ಬಗ್ಗೆ ಅಲ್ಲ ಎಂದು ಹೇಳಿದರು, ಅವರು ಏನೇ ಮಾಡಿದರೂ ಜನಸಾಮಾನ್ಯರು ಅವರನ್ನು ತಿರಸ್ಕರಿಸುತ್ತಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

“ಪಂಜಾಬ್ ನಲ್ಲಿ (ಉಪಚುನಾವಣೆಗಳು) ಏನು ನಡೆಯಿತು ಎಂಬುದನ್ನು ಎಲ್ಲರೂ ನೋಡಿದ್ದಾರೆ. ರಾಷ್ಟ್ರವು ಅವರ ಪಿತೂರಿಗಳನ್ನು ವಿಫಲಗೊಳಿಸುತ್ತದೆ” ಎಂದು ಅವರು ಹೇಳಿದರು.

ಶಾ ಮೆಹಮೂದ್ ಖುರೇಷಿ, ಅಸಾದ್ ಉಮರ್, ಫವಾದ್ ಚೌಧರಿ ಮತ್ತು ಶಿರೀನ್ ಮಜಾರಿ ಭಾಗವಹಿಸಿದ್ದ ಸಭೆಯಲ್ಲಿ ಭವಿಷ್ಯದ ರಾಜಕೀಯ ಕಾರ್ಯತಂತ್ರ ಮತ್ತು ಸಿಂಧ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡುವ ಬಗ್ಗೆಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ತಮ್ಮ ನಾಯಕತ್ವದ ತಪ್ಪುಗಳಿಂದಾಗಿ ಸರ್ಕಾರಿ ಸಂಸ್ಥೆಗಳು ಒಂದು ಸುಳಿಯಲ್ಲಿ ಸಿಲುಕಿವೆ ಮತ್ತು ಅವು ತಮ್ಮ ಮಿತಿಯೊಳಗೆ ಉಳಿದಿದ್ದರೆ ನಕಾರಾತ್ಮಕವಾಗಿ ಏನೂ ಸಂಭವಿಸುತ್ತಿರಲಿಲ್ಲ ಎಂದು ಚೌಧರಿ ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು