Categories: ವಿದೇಶ

ಇರಾನ್’ನಲ್ಲಿನ ‘ಅವಳಿ ಬಾಂಬ್ ಸ್ಫೋಟ’ದ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್

ಟೆಹ್ರಾನ್‌: ಇರಾನ್‌ನಲ್ಲಿ ಅವಳಿ ಬಾಂಬ್‌ ಸ್ಫೋಟಗೊಂಡು 103 ಮಂದಿ ಸಾವನ್ನಪ್ಪಿ, 141 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಅವರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ದುರ್ಘಟನೆ ನಡೆದಿದ್ದು, ಭಾರೀ ಆತಂಕವನ್ನೂ ಸೃಷ್ಟಿ ಮಾಡಿದೆ.

ಇನ್ನು ಸುಮಾರು 103 ಜನರ ಸಾವಿಗೆ ಕಾರಣವಾದ ಮತ್ತು ಅನೇಕರು ಗಾಯಗೊಂಡ ಎರಡು ಸ್ಫೋಟಗಳ ಜವಾಬ್ದಾರಿಯನ್ನ ಇಸ್ಲಾಮಿಕ್ ಸ್ಟೇಟ್ ಗುರುವಾರ ವಹಿಸಿಕೊಂಡಿದೆ. ಗುಂಪು ತನ್ನ ಸಂಯೋಜಿತ ಟೆಲಿಗ್ರಾಮ್ ಚಾನೆಲ್ಗಳಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

2020ರಲ್ಲಿ ಅಮೆರಿಕಾವು ಬಾಗ್ದಾದ್‌ದ ವಿಮಾನ ನಿಲ್ದಾಣದ ಮೇಲೆ ಡ್ರೋಣ್‌ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಕಮಾಂಡರ್‌ ಕಾಸ್ಸೇಮ್‌ ಸೋಲೈಮನಿ ಹತರಾಗಿದ್ದರು. ಇವರ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರತಿ ವರ್ಷ ಇರಾನ್‌ನಲ್ಲಿ ಆಯೋಜಿಸಲಾಗುತ್ತಿದೆ. ಕೆರ್ಮಾನ್‌ನಲ್ಲಿರುವ ಕಾಸ್ಸೇಮ್‌ ಸೋಲೈಮನಿ ಅವರ ಸ್ಮಾರಕದ ಬಳಿಯೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ.

ಈ ವರ್ಷದ ಕಾರ್ಯಕ್ರಮವನ್ನು ಬುಧವಾರ ಆಯೋಜನೆ ಮಾಡಲಾಗಿದ್ದು, ಇದೇ ಸಂದರ್ಭ ಅವಳಿ ಬಾಂಬ್‌ ಸ್ಫೋಟ ನಡೆದಿದೆ. ಘಟನೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ ಡಬ್ಬಿಯನ್ನು ಎಸೆಯಲಾಯಿತು. ಇದು ಸಿಡಿಯುತಲೇ ಇನ್ನಷ್ಟು ಡಬ್ಬಗಳನ್ನು ನಿರಂತರವಾಗಿ ಎಸೆಯಲಾಯಿತು. ಆಗ ಭಯಾನಕ ಸ್ಪೋಟಗಳು ಸಂಭವಿಸಿದವು ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ.

 

Ashitha S

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 min ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

15 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

31 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

55 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago