ಜೆರುಸಲೇಂ: ಹಮಾಸ್ ಉಗ್ರರಿಗೆ ಚಿಕಿತ್ಸೆ ನೀಡುವುದನ್ನು ನಿಲ್ಲಿಸುವಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಇಸ್ರೇಲ್ ನಿರ್ಗಮಿತ ಆರೋಗ್ಯ ಸಚಿವ ಮೋಶೆ ಅರ್ಬೆಲ್ ಅವರು ಕರೆಕೊಟ್ಟಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಆರೋಗ್ಯ ಸಚಿವರು ಪತ್ರ ಬರೆದಿದ್ದು, ದಾಳಿಯ ನಂತರ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಮಾಸ್ ಭಯೋತ್ಪಾದಕರಿಗೆ ಚಿಕಿತ್ಸೆ ನೀಡುತ್ತಿರುವುದರಿಂದ ಆರೋಗ್ಯ ವ್ಯವಸ್ಥೆಯಲ್ಲಿ ಭಾರಿ ತೊಂದರೆ ಉಂಟುಮಾಡಿದೆ ಎಂದು ಹೇಳಿದ್ದಾರೆ
“ಈ ಕಷ್ಟದ ಸಮಯದಲ್ಲಿ, ಆರೋಗ್ಯ ವ್ಯವಸ್ಥೆಯು ಕ್ರಿಮಿನಲ್ ಹತ್ಯಾಕಾಂಡದ ಸಂತ್ರಸ್ತರ ಚಿಕಿತ್ಸೆ, IDF ಸೈನಿಕರು ಮತ್ತು ಮುಂದಿನ ದಾಳಿಯ ಮೇಲೆ ಸಂಪೂರ್ಣವಾಗಿ ಗಮನಹರಿಸಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಶಾಪಗ್ರಸ್ತ ಮತ್ತು ಹೇಯ ಕೃತ್ಯ ಎಸಗುತ್ತಿರುವ ಉಗ್ರರನ್ನು ರಕ್ಷಿಸುವ ಮತ್ತು ಚಿಕಿತ್ಸೆ ನೀಡುವ ಕಾರ್ಯ ಗಮನಾರ್ಹವಾಗಿ ಹಾನಿ ಮಾಡುತ್ತಿದೆ. ಆದ್ದರಿಂದ, ನನ್ನ ಸೂಚನೆಯಂತೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಉಗ್ರರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿಗೆ ತಿಳಿಸಿದ್ದಾರೆ.
ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.
ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.
ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…
ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…
ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…