Categories: ವಿದೇಶ

ಕಾಬೂಲ್: 6 ಐಎಸ್ ಉಗ್ರರನ್ನು ಕೊಂದ ತಾಲಿಬಾನ್ ಪಡೆ

ಕಾಬೂಲ್: ತಾಲಿಬಾನ್ ಪಡೆಗಳು ಕಾಬೂಲ್ ನ ಇಸ್ಲಾಮಿಕ್ ಸ್ಟೇಟ್(ಐಎಸ್) ಅಡಗುತಾಣಕ್ಕೆ ನುಗ್ಗಿ ಆರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ ಎಂದು ಅಫ್ಘಾನ್ ಸರ್ಕಾರದ ವಕ್ತಾರರು ಶನಿವಾರ ತಿಳಿಸಿದ್ದಾರೆ.

“ಇಸ್ಲಾಮಿಕ್ ಎಮಿರೇಟ್ ನ ವಿಶೇಷ ಘಟಕಗಳ ಪಡೆಗಳು ನಿನ್ನೆ (ಶುಕ್ರವಾರ) ಐಎಸ್ ಭಯೋತ್ಪಾದಕರ ಅಡಗುತಾಣವನ್ನು ಪತ್ತೆಹಚ್ಚಿವೆ ಮತ್ತು ಇಬ್ಬರು ಕಾರ್ಯಕರ್ತರನ್ನು ಬಂಧಿಸಿವೆ, ಅದರ ನಂತರ ಪೊಲೀಸ್ ಜಿಲ್ಲೆ 8 ರಲ್ಲಿ ಅವರ ಅಡಗುತಾಣಕ್ಕೆ ನುಗ್ಗಿ ಆರು ಬಂಡುಕೋರರನ್ನು ಹತ್ಯೆಗೈದಿದ್ದಾರೆ” ಎಂದು ತಾಲಿಬಾನ್ ನೇತೃತ್ವದ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಟ್ವೀಟ್ ಮಾಡಿದ್ದಾರೆ.

ಅಡಗುತಾಣದಿಂದ ಅಸಾಲ್ಟ್ ರೈಫಲ್, ಹ್ಯಾಂಡ್ ಗ್ರೆನೇಡ್, ಸ್ಫೋಟಕ ವಸ್ತುಗಳು ಮತ್ತು ಕಾರು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಜಾಹಿದ್ ಅವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಕೆಲವು ಮೃತ ಭಯೋತ್ಪಾದಕರು ವಜೀರ್ ಅಕ್ಬರ್ ಖಾನ್ ನ ಮಸೀದಿ ಮತ್ತು ದಶ್ತ್-ಎ-ಬಾರ್ಚಿ ಜಿಲ್ಲೆಯ ಕಾಲೇಜೊಂದರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು, ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಮುಜಾಹಿದ್ ದೃಢಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉತ್ತರ ಕುಂಡುಜ್ ಪ್ರಾಂತ್ಯದಲ್ಲಿ ತಾಲಿಬಾನ್ ಪಡೆಗಳು ಇದೇ ರೀತಿಯ ಕಾರ್ಯಾಚರಣೆಗಳಲ್ಲಿ ಐವರು ಭಯೋತ್ಪಾದಕರನ್ನು ಕೊಂದಿದ್ದರಿಂದ ಇದು ಅಫ್ಘಾನಿಸ್ತಾನದಲ್ಲಿ ಐಎಸ್ ವಿರುದ್ಧದ ಎರಡನೇ ಕಾರ್ಯಾಚರಣೆಯಾಗಿದೆ.

Ashika S

Recent Posts

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

2 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

8 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

18 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

29 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

46 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

57 mins ago