ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂದು ಕೆನಡಾ ಸರ್ಕಾರ ಆರೋಪಿಸಿದ ಬೆನ್ನಲ್ಲೇ ಕೆನಡಾದಲ್ಲಿ ಮತ್ತೊಬ್ಬ ಭಾರತ ವಿರೋಧಿ ಖಲಿಸ್ತಾನಿ ಉಗ್ರನನ್ನು ಹತ್ಯೆಯಾಗಿದೆ.
ಪಂಜಾಬ್ ಮೂಲದ ಗ್ಯಾಂಗ್ಸ್ಟರ್ ಸುಖ್ದೂಲ್ ಸಿಂಗ್ನನ್ನು ಬುಧವಾರ (ಸೆ.20) ರಾತ್ರಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.ದವಿಂದರ್ ಬಾಂಬಿಹಾ ಎಂಬ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದ ಸುಖಾ ದುನೆಕೆಯನ್ನು ಮೋಗಾ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುಪ್ತಚರ ಮೂಲಗಳಿಂದ ತಿಳಿದುಬಂದಿದೆ.
ಗ್ಯಾಂಗ್ವಾರ್ನಲ್ಲಿ ಸುಖಾ ದುನೆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜೂನ್ 19ರಂದು ಆಂತರಿಕ ಗ್ಯಾಂಗ್ವಾರ್ನಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಸರ್ರೆಯಲ್ಲಿ ಹತ್ಯೆ ಮಾಡಲಾಗಿತ್ತು. ಇಬ್ಬರ ಹತ್ಯೆಯ ಮಾದರಿಯೂ ಒಂದೇ ಆಗಿದೆ ಎಂದು ಮೂಲಗಳು ತಿಳಿಸಿವೆ