ವಿದೇಶ

ಮಾಸ್ಕೋ: ಸ್ನೇಹಪರವಲ್ಲದ ಹೂಡಿಕೆದಾರರೊಂದಿಗೆ ವಹಿವಾಟು ನಿಷೇಧಿಸುವಂತೆ ಪುಟಿನ್ ಆದೇಶ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ವರ್ಷಾಂತ್ಯದವರೆಗೆ ರಷ್ಯಾದ ಆಯಕಟ್ಟಿನ ಉದ್ಯಮಗಳು ಮತ್ತು ಯೋಜನೆಗಳಲ್ಲಿ ತಮ್ಮ ಷೇರುಗಳ ಜೊತೆ ವಹಿವಾಟು ನಡೆಸದಂತೆ “ಸ್ನೇಹಪರವಲ್ಲದ” ಹೂಡಿಕೆದಾರರನ್ನು ನಿಷೇಧಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ.

ಕಾನೂನು ಮಾಹಿತಿಗಾಗಿ ದೇಶದ ಅಧಿಕೃತ ಪೋರ್ಟಲ್  ನಲ್ಲಿ ಪ್ರಕಟವಾದ ಈ ಆದೇಶವು ಡಿಸೆಂಬರ್ 31 ರವರೆಗೆ ರಷ್ಯಾದ ಆಯಕಟ್ಟಿನ ಉದ್ಯಮಗಳು ಮತ್ತು ಬ್ಯಾಂಕುಗಳಲ್ಲಿನ ತಮ್ಮ ಷೇರುಗಳು ಮತ್ತು ಸ್ವತ್ತುಗಳೊಂದಿಗೆ ಯಾವುದೇ ರೀತಿಯ ವಹಿವಾಟುಗಳನ್ನು ನಡೆಸುವುದನ್ನು “ಸ್ನೇಹಪರವಲ್ಲದ ದೇಶಗಳಿಗೆ” ಸಂಬಂಧಿಸಿದ ವಿದೇಶಿಯರನ್ನು ನಿಷೇಧಿಸುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಈ ಆದೇಶದ ಪ್ರಕಾರ, ವಿದೇಶಿ ಹೂಡಿಕೆದಾರರು ಸಖಾಲಿನ್ -1 ತೈಲ ಮತ್ತು ಅನಿಲ ಯೋಜನೆ ಮತ್ತು ಖರಿಯಾಜಿನ್ಸ್ಕೋಯೆ ತೈಲ ಕ್ಷೇತ್ರದ ಯೋಜನೆಯಲ್ಲಿನ ಷೇರುಗಳೊಂದಿಗೆ ವಹಿವಾಟು ನಡೆಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶದ ಅಡಿಯಲ್ಲಿ ಬರುವ ಎಲ್ಲಾ ಬ್ಯಾಂಕ್ ಗಳ ಪಟ್ಟಿಯನ್ನು 10 ದಿನಗಳ ಒಳಗೆ ಸಂಗ್ರಹಿಸುವಂತೆ ರಷ್ಯಾದ ಅಧ್ಯಕ್ಷರು ಕೇಂದ್ರ ಬ್ಯಾಂಕ್ ಮತ್ತು ಸರ್ಕಾರಕ್ಕೆ ಆದೇಶಿಸಿದ್ದಾರೆ.

ಇದಕ್ಕೆ ಅಪವಾದವೆಂಬಂತೆ, ಪುಟಿನ್ ಇದನ್ನು ಅನುಮತಿಸಿದರೆ ಮಾತ್ರ ಕೆಲವು ವಹಿವಾಟುಗಳನ್ನು ಅನುಮತಿಸಲಾಗುತ್ತದೆ, ಮತ್ತು ಡಿಕ್ರಿಯನ್ನು ಅದರ ಮುಕ್ತಾಯದ ದಿನಾಂಕದ ನಂತರ ವಿಸ್ತರಿಸಬಹುದು.

“ರಷ್ಯಾದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಯುಎಸ್ ಮತ್ತು ಇತರ ವಿದೇಶಗಳು ಮತ್ತು ಸಂಘಟನೆಗಳ ಪ್ರತಿಕೂಲ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago