ಕಠ್ಮಂಡು: ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.
ಜಾಜರಕೋಟ್ನಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಜಾಜರಕೋಟ್ ಡೆಪ್ಯುಟಿ ಮೇಯರ್ ಕೂಡ ಮೃತಪಟ್ಟಿದ್ದಾರೆ. ಪಶ್ಚಿಮ ರುಕುಂ ಜಿಲ್ಲೆಯಲ್ಲಿ 36 ಜನ, ಜಾಜರಕೋಟ್ನಲ್ಲಿ 34 ಜನ ಸಾವನ್ನಪ್ಪಿದ್ದು, ಒಟ್ಟಾರೆಯಾಗಿ 128 ಮಂದಿಯನ್ನು ಭೂಕಂಪವು ಬಲಿ ಪಡೆದುಕೊಂಡಿದೆ.
ಕೆಲವು ದಿನಗಳ ಹಿಂದೆ, ಅಕ್ಟೋಬರ್ 22 ರಂದು ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಧಾಡಿಂಗ್ನಲ್ಲಿದ್ದು, ದೆಹಲಿ-ಎನ್ಸಿಆರ್ ಪ್ರದೇಶದಲ್ಲಿಯೂ ಭೂಕಂಪದ ಕಂಪನದ ಅನುಭವವಾಗಿತ್ತು.