ನೇಪಾಳ: ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.
ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್ ಆಳದ ನದಿಗೆ ಬಿದ್ದಿದೆ,
ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.
ಭಾಲುಬಾಂಗ್ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್ಗಂಜ್ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.ಆದ್ರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…