Categories: ವಿದೇಶ

ಪುತ್ರಿಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿರಿಸಿದ ಮಹಾಪಾಪಿ ತಾಯಿ

ಬ್ರೆಸಿಲಿಯಾ: ಸ್ವತಃ ತಾಯಿಯೇ ಮಗಳನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಒಂದು ತಿಂಗಳ ಕಾಲ ಇರಿಸಿದ ಘಟನೆ ಬ್ರೆಜಿಲ್‌ನ ಸಾವೊ ಪಾಲೊದಲ್ಲಿ ನಡೆದಿದೆ.

ಸ್ಥಳೀಯ ಸುದ್ದಿವಾಹಿನಿ ಜಿ1 ಪ್ರಕಾರ, 30 ವರ್ಷದ ರುತ್ ಫ್ಲೋರಿಯಾನೊ ಎಂಬ ಮಹಿಳೆ ತನ್ನ ಒಂಬತ್ತು ವರ್ಷದ ಮಗುವನ್ನು ಆಗಸ್ಟ್‌ 8, 9ರ ನಡುವೆ ಕೊಂದಿದ್ದು, ಮೂರು ವಾರಗಳ ಕಾಲ ಫ್ರಿಜ್‌ನಲ್ಲಿ ಇರಿಸಿದ್ದಳು. ಸದ್ಯ ಆಕೆಯನ್ನು ಪೊಲೀಸರು ಬಂಧಿಸಿದ್ದು ಮಾದಕ ದ್ರವ್ಯ ಸೇವಿಸಿ ಅಮಲಿನಲ್ಲಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಈ ನಡುವೆ ಆಕೆಯ ಇತರ ಇಬ್ಬರು ಮಕ್ಕಳನ್ನು ನಗರ ಏಜೆನ್ಸಿಯೊಂದರ ಆರೈಕೆಯಲ್ಲಿ ಇರಿಸಲಾಗಿದೆ.

ಫ್ಲೋರಿಯಾನೊ ತನ್ನ ಪತಿಯಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದಳು. ಆದರೆ ಇದಕ್ಕೆ ಪುತ್ರಿ ಅಲನಿ ವಿರೋಧ ವ್ಯಕ್ತಪಡಿಸಿರುವುದೇ ಕೃತ್ಯ ಎಸಗಲು ಕಾರಣ ಎಂದು ತಿಳಿದು ಬಂದಿದೆ. ಫ್ಲೋರಿಯಾನೊ ತನ್ನ ಮಗಳು ಅಲನಿ ಸಿಲ್ವಾಳನ್ನು ತುಂಡರಿಸಲು “ಸುಲಭವಾದ ಮಾರ್ಗ” ವನ್ನು ತಿಳಿಯಲು ಇಂಟರ್ನೆಟ್ ಸರ್ಚ್ ಮಾಡಿದ್ದಳು ಎಂದು ಬ್ರೆಜಿಲಿಯನ್ ಸಿವಿಲ್ ಪೋಲಿಸರು ತಿಳಿಸಿದ್ದಾರೆ.

ಫ್ಲೋರಿಯಾನೊಗೆ ಡೇಟಿಂಗ್‌ ಅಪ್ಲಿಕೇಶನ್‌ ಮೂಲಕ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನನ್ನು ತನ್ನ ಮನೆಗೆ ಆಹ್ವಾನಿಸಿದ್ದಳು. ಈ ವ್ಯಕ್ತಿ ಮನೆಗೆ ಭೇಟಿ ನೀಡುವ ಮೊದಲೇ ಮಗಳನ್ನು ಕೊಲೆ ಮಾಡಿದ್ದಳು. ಫ್ಲೋರಿಯಾನೊ ತನ್ನ ಪುತ್ರಿಯ ದೇಹದ ಭಾಗಗಳನ್ನು 3 ವಾರಗಳ ಕಾಲ ರೆಫ್ರಿಜರೇಟರ್‌ನಲ್ಲಿ ಇರಿಸಿ ನಂತರ ಹತ್ತಿರದ ಒಳಚರಂಡಿಗೆ ಎಸೆದಿದ್ದಳು.

Ashika S

Recent Posts

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

6 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

16 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

30 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

42 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

45 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

51 mins ago