News Karnataka Kannada
Sunday, April 28 2024
ವಿದೇಶ

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರ ದಾಳಿ

Bomb Blast
Photo Credit : Pixabay

ಅಫ್ಘಾನಿಸ್ತಾನ: ಕಾಬೂಲ್‌ನಲ್ಲಿರುವ ಗುರುದ್ವಾರ ಕರ್ತೆ ಪರ್ವಾನ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಗುರುದ್ವಾರ ಸಾಹಿಬ್ ಆವರಣದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ.

ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ಟೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಕೂಡ ಈ ಕುರಿತು ಕಳವಳ ವ್ಯಕ್ತಪಡಿಸಿದ್ದು ಘಟನೆಯ ಬೆಳವಣಿಗೆಗಳ ಬಗ್ಗೆ ಗಮನ ಹರಿಸುತ್ತಿರುವುದಾಗಿ ಹೇಳಿದೆ.

ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು