ಉಕ್ರೇನ್: ವಿನ್ನಿಟ್ಸಿಯಾದಲ್ಲಿ ರಷ್ಯಾದ ಕ್ಷಿಪಣಿ ಅಪ್ಪಳಿಸಿದ್ದು ದಾಳಿಯ 23 ನಾಗರಿಕರು ಸಾವನ್ನಪ್ಪಿರುವುದಾಗಿ ಉಕ್ರೇನ್ ಅದೀಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಮೂವರು ಮಕ್ಕಳಿದ್ದರು ಎನ್ನಲಾಗಿದೆ. ಇದುವರೆಗೆ ಆರು ಮೃತ ದೇಹಗಳನ್ನು ಮಾತ್ರ ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ.
ಕ್ಷಿಪಣಿ ದಾಳಿಯಲ್ಲಿ ಉಕ್ರೇನ್ನ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. 34 ಮಂದಿ ಗಂಭೀರವಾಗಿ ಗಾಯಗಳಾಗಿವೆ 39 ಮಂದಿ ಎಲ್ಲಿದ್ದಾರೆ ಎಂಬುದು ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ರಷ್ಯಾ ನಾಗರೀಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೇಳಿದ್ದಾರೆ.
ಪ್ರತಿದಿನ ಇಂತಹ ದಾಳಿಗಳು ನಡೆಯುತ್ತಲೇ ಇವೆ ಎಂದು ಟೆಲಿಗ್ರಾಂನಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ. ರಷ್ಯಾ ದಾಳಿಗಳು ಮಿಲಿಟರಿಯ ಬದಲಿಗೆ ನಾಗರಿಕರನ್ನು ಗುರಿಯಾಗಿಸುತ್ತಿವೆ ಇದೊಂದು ಭಯೋತ್ಪಾದನಾ ಕೃತ್ಯ ಎಂದು ಕೆಂಡಕಾರಿದ್ದಾರೆ. ರಷ್ಯಾ ಉಡಾಯಿಸಿದ ಎರಡು ಕ್ಷಿಪಣಿಗಳನ್ನು ಹೊಡೆದುರುಳಿಸಿರುವುದಾಗಿ ಮತ್ತೆರಡು ಕ್ಷಿಪಣಿಗಳು ವಿನ್ನಿಟ್ಸಿಯಾದಲ್ಲಿನ ಅಪಾರ್ಟ್ಮೆಂಟ್ಗೆ ಡಿಕ್ಕಿ ಹೊಡೆದಿವೆ ಎಂದು ತಿಳಿಸಿದ್ದಾರೆ. ಆದರೆ ರಷ್ಯಾದ ಅಧಿಕಾರಿಗಳು ದಾಳಿಯನ್ನು ಅಧಿಕೃತವಾಗಿ ಘೋಷಿಸಿಲ್ಲ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…