ಜಕಾರ್ತಾ: ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಪೂಜಾ ಕೇಂದ್ರಕ್ಕೆ ಹಾನಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಪ್ರಾಂತ್ಯದ ಆಗಮ್ ರೀಜೆನ್ಸಿಯಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಭೂಕುಸಿತದಿಂದ ಹಾನಿಗೊಳಗಾದ ಪೂಜಾ ಕಟ್ಟಡದೊಳಗೆ ಇಬ್ಬರು ಇದ್ದರು ಎಂದು ರೀಜೆನ್ಸಿಯ ವಿಪತ್ತು ತಗ್ಗಿಸುವ ಏಜೆನ್ಸಿಯ ಮುಖ್ಯಸ್ಥ ಬಾಂಬಾಂಗ್ ವಾರ್ಸಿಟೊ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಶುಕ್ರವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅವರು ಹೇಳಿದರು. ಮಳೆಗಾಲದಲ್ಲಿ ಇಂಡೋನೇಷ್ಯಾದಲ್ಲಿ ಪ್ರವಾಹ ಮತ್ತು ಭೂಕುಸಿತದಂತಹ ವಿಪತ್ತುಗಳು ಹೆಚ್ಚಾಗಿ ಸಂಭವಿಸುತ್ತವೆ.