Categories: ವಿದೇಶ

ಯಾರಿಗೂ ನಾವು ನಮ್ಮನ್ನು ಹೆದರಿಸಲು ಪರವಾನಗಿ ನೀಡಿಲ್ಲ: ಮುಯಿಜು

ಮಾಲೆ: ಪ್ರಧಾನಿ ನರೇಂದ್ರ ಮೋದಿ  ಅವರು ಲಕ್ಷದ್ವೀಪಕ್ಕೆ  ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿದೆ.

ಇಷ್ಟಾದರೂ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು  ಅವರ ಜಂಭ ಕಡಿಮೆಯಾಗಿಲ್ಲ. ಐದು ದಿನಗಳ ಚೀನಾ ಭೇಟಿ ಮುಗಿಸಿ ಮಾಲ್ಡೀವ್ಸ್‌ಗೆ ಆಗಮಿಸಿದ ಮೊಹಮ್ಮದ್‌ ಮುಯಿಜು, ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ವೇಳೆ “ಮಾಲ್ಡೀವ್ಸ್‌ ಚಿಕ್ಕ ರಾಷ್ಟ್ರ ಆಗಿರಬಹುದು. ಆದರೆ, ನಾವು ಸ್ವತಂತ್ರರಾಗಿದ್ದೇವೆ, ಸಾರ್ವಭೌಮತ್ವ ಹೊಂದಿದ್ದೇವೆ. ಯಾರಿಗೂ ನಾವು ನಮ್ಮನ್ನು ಹೆದರಿಸಲು ಪರವಾನಗಿ ನೀಡಿಲ್ಲ. ಅಷ್ಟಕ್ಕೂ, ನಾವು ಸಮುದ್ರ ಪ್ರದೇಶದಲ್ಲಿ ಭಾರತದ ಜತೆ ಯಾವುದೇ ಸಹಭಾಗಿತ್ವ, ಪಾಲುದಾರಿಕೆಯನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಈ ಮೊದಲೇ  ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಚೀನಾ ಪರ ಒಲವುಳ್ಳ ನಾಯಕ ಎಂದು ಗುರುತಿಸಿಕೊಂಡಿದ್ದಾರೆ.  ಈಗ ಚೀನಾಗೆ ತೆರಳಿರುವ ಮೊಹಮ್ಮದ್‌ ಮುಯಿಜು, 50 ದಶಲಕ್ಷ ಡಾಲರ್‌ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಸಾಲ, ವ್ಯಾಪಾರದ ಆಸೆ ತೋರಿಸುತ್ತಿರುವ ಚೀನಾ, ಪಾಕಿಸ್ತಾನದಂತೆ ಮಾಲ್ಡೀವ್ಸ್‌ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.

ಚೀನಾ ಭೇಟಿ ಬಳಿಕ ಮೊಹಮ್ಮದ್‌ ಮುಯಿಜು ಧಾಟಿಯೇ ಬದಲಾಗಿದೆ. ಚೀನಾ ಪರ ಹೆಚ್ಚಿನ ಒಲವು  ತೋರಿಸುತ್ತಿದ್ದು ಭಾರತವನ್ನು ಕಡೆಗಣಿತ್ತಿದೆ.

Ashika S

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

27 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

40 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago