ವಿಶ್ವಸಂಸ್ಥೆ: ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಕಾರ್ಯಸೂಚಿಯ “ಕೇಂದ್ರ”ಕ್ಕೆ ತರಲು ಇಸ್ಲಾಮಾಬಾದ್ಗೆ ಸಾಧ್ಯವಾಗುತ್ತಿಲ್ಲ. ಭಾರತದ ರಾಜತಾಂತ್ರಿಕತೆ ಮಾದರಿ ತಮ್ಮ ಪ್ರಯತ್ನಗಳನ್ನು ವಿಫಲಗೊಳಿಸಲು ಸಮರ್ಥವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಒಪ್ಪಿಕೊಂಡಿದ್ದಾರೆ.
“ವಿಶ್ವಸಂಸ್ಥೆಯಲ್ಲಿ ಕಾಶ್ಮೀರವನ್ನು ಕಾರ್ಯಸೂಚಿಯ ಕೇಂದ್ರವಾಗಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಪಾಕಿಸ್ತಾನವು ಯುಎನ್ನಲ್ಲಿ ವಾಸ್ತವಿಕವಾಗಿ ಏಕಾಂಗಿಯಾಗಿದೆ. ಪ್ರತಿ ಬಾರಿ ಕಾಶ್ಮೀರ ಸಮಸ್ಯೆಯನ್ನು ಪ್ರಸ್ತಾಪಿಸುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಉನ್ನತ ಮಟ್ಟದ ಜನರಲ್ ಅಸೆಂಬ್ಲಿ ಸಭೆಯಲ್ಲಿ ಕಾಶ್ಮೀರವನ್ನು ಪ್ರಸ್ತಾಪಿಸಿದ 193 ಸದಸ್ಯರಲ್ಲಿ ಪಾಕಿಸ್ತಾನದ ಹೊರತಾಗಿ, ಟರ್ಕಿ ಮಾತ್ರ ಕಾಶ್ಮೀರವನ್ನು ಪ್ರಸ್ತಾಪಿಸಿದೆ. ಇದು ದುರದೃಷ್ಟಕರ. ಕಾಶ್ಮೀರ ವಿಷಯದಲ್ಲಿ ಭಾರತದ ವಿರುದ್ಧ ವಿಶ್ವಸಂಸ್ಥೆಯಲ್ಲಿ ಯಾರೂ ಕೂಡ ಧ್ವನಿ ಎತ್ತದಿರುವುದು ವಿಪರ್ಯಾಸ. ಇದರಿಂದಾಗಿ 75 ವರ್ಷಗಳ ನಂತರವೂ ಸಮಸ್ಯೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.