News Karnataka Kannada
Thursday, May 09 2024
ವಿದೇಶ

ಉಗ್ರವಾದ ರಫ್ತು ಮಾಡುವವರನ್ನು ಮೆಟ್ಟಿ ನಿಲ್ಲುವ ತಾಕತ್ತು ಬೇಕು: ಅಮೆರಿಕದಲ್ಲಿ ಪ್ರಧಾನಿ ಮೋದಿ

Air show is a symbol of country's progress: PM Narendra Modi
Photo Credit : News Kannada

ವಾಷಿಂಗ್ಟನ್‌: ಉಗ್ರವಾದ ಮನುಕುಲದ ಶತ್ರು, ಅದಕ್ಕೆ ಯಾವುದೇ ಸಮರ್ಥನೆಗಳಾಗಲೀ, ಕ್ಷಮೆಯಾಗಲೀ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಮೇರಿಕಾ ಅಧ್ಯಕ್ಷರೊಂದಿಗೆ ದ್ವಿಪಕ್ಷಿಯ ಮಾತುಕತೆ, ಜಂಟಿ ಸುದ್ದಿಗೋಷ್ಠಿಯ ಬಳಿಕ ಕಾಂಗ್ರೆಸ್ ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಸ್ ನ ಕಾಂಗ್ರೆಸ್ ನ್ನುದ್ದೇಶಿಸಿ ಮಾತನಾಡುವುದು ಎಂದಿಗೂ ಅತ್ಯಂತ ಗೌರವದ ಸಂಗತಿಯಾಗಿದ್ದು, ಎರಡು ಬಾರಿ ಕಾಂಗ್ರೆಸ್ ನ ಜಂಟಿ ಸದನವನ್ನುದ್ದೇಶಿಸಿ ಮಾತನಾಡಲು ಅವಕಾಶ ಲಭಿಸಿದ್ದು ಅಸಾಧಾರಣವಾದುದ್ದಾಗಿದೆ. ಈ ಗೌರವಕ್ಕಾಗಿ ನಾನು ಭಾರತದ 1.4 ಶತಕೋಟಿ ಜನರಿಗೆ ನನ್ನ ಆಳವಾದ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಿಮ್ಮಲ್ಲಿ ಅರ್ಧದಷ್ಟು ಮಂದಿ 2016 ರಲ್ಲಿಯೂ ಇಲ್ಲಿ ಇದ್ದರು. ಹಳೆಯ ಸ್ನೇಹಿತರಲ್ಲಿ ಹಾಗೂ ಇನ್ನರ್ಧ ಇರುವ ಹೊಸ ಸ್ನೇಹಿತರಲ್ಲಿ ನಾನು ಉತ್ಸಾಹವನ್ನು ಕಾಣುತ್ತಿದ್ದೇನೆ ಎಂದು ಮೋದಿ ಜಂಟಿ ಸದಸನದ ಸದಸ್ಯರನ್ನುದ್ದೇಶಿಸಿ ಮಾತನಾಡಿದರು.
ತಮ್ಮ ಭಾಷಣದಲ್ಲಿ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕಠಿಣ ನಿಲುವು ಪ್ರಕಟಿಸಿದ ಪ್ರಧಾನಿ ಮೋದಿ, ಉಗ್ರವಾದ ಮನುಕುಲದ ಶತ್ರು, ಅದಕ್ಕೆ ಯಾವುದೇ ಸಮರ್ಥನೆಗಳಾಗಲೀ, ಕ್ಷಮೆಯಾಗಲೀ ಇಲ್ಲ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

9/11 ನ ಎರಡು ದಶಕಗಳು ಹಾಗೂ ಮುಂಬೈ ನ 26/11 ಘಟಿಸಿದ ಒಂದು ದಶಕಗಳ ಬಳಿಕವೂ ತೀವ್ರವಾದ ಹಾಗೂ ಭಯೋತ್ಪಾದನೆ ಜಗತ್ತಿನ್ನು ಕಾಡುತ್ತಿರ ಆಪತ್ತಾಗಿಯೇ ಉಳಿದುಕೊಂಡಿದೆ ಎಂದು ಮೋದಿ ಹೇಳಿದ್ದಾರೆ.

ಭಯೋತ್ಪಾದನೆ ವಿಷಯದಲ್ಲಿ ಸಮರ್ಥನೆ, ಕ್ಷಮೆಗಳಿಗೆ ಅವಕಾಶವಿಲ್ಲ. ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಹಾಗೂ ರಪ್ತು ಮಾಡುತ್ತಿರುವ ಶಕ್ತಿಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದು ಮೋದಿ ಕರೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು