ಇಸ್ಲಾಮಾಬಾದ್: ಸೂಪರ್ ಪವರ್ ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಹೇಳಿದರು.
ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.
ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ.
ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…